ರಾಯಚೂರು,ಜು.12- ಮಹಿಳೆಯೊಬ್ಬಳು ಪತಿಯನ್ನೇ ನದಿಗೆ ತಳ್ಳಿದ ಘಟನೆ ರಾಯಚೂರಿನಲ್ಲಿ ನಡೆದಿದೆ.ಪತಿಯನ್ನು ಪುಸಲಾಯಿಸಿಕೊಂಡು ರಾಯಚೂರು ತಾಲ್ಲೂಕಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ಗೆ ಕರೆದುಕೊಂಡು ಬಂದ ಮಹಿಳೆ ಫೋಟೊಶೂಟ್ ಮಾಡಿದ್ದಾರೆ. ಬ್ರಿಡ್ಜ್ ಮೇಲೆ ನಿಂತು ಮೊದಲು ತಾನು ಫೋಟೊ ತೆಗೆಸಿಕೊಂಡಿದ್ದ ಪತ್ನಿ ನಂತರ ಪತಿಯನ್ನು ಬ್ರಿಡ್ಜ್ ತುದಿಗೆ ಹೋಗಿ ನಿಲ್ಲಲು ಹೇಳಿದ್ದಾರೆ. ಇದೇ ವೇಳೆ ಬ್ರಿಡ್ಜ್ ನ ತುದಿಯಲ್ಲಿದ್ದ ಪತಿಯನ್ನು ಕೆಳಕ್ಕೆ ತಳ್ಳಿದ್ದಾರೆ.
ಕೃಷ್ಣಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದರಿಂದ ಆ ವ್ಯಕ್ತಿ ಸ್ವಲ್ಪ ದೂರ ಕೊಚ್ಚಿಕೊಂಡು ಹೋಗಿದ್ದಾರೆ. ಈಜು ಚೆನ್ನಾಗಿ ಬರುತ್ತಿದ್ದುದ್ದರಿಂದ ಈಜಿಕೊಂಡು ಹೋಗಿ ನದಿಭಾಗದ ಬಂಡೆಯೊಂದರ ಮೇಲೆ ಕುಳಿತು ಬಚಾವಾಗಿದ್ದಾರೆ.ಅವರ ಕಿರುಚಾಟ ಕೇಳಿ ಅಕ್ಕಪಕ್ಕದ ಜನ ಸ್ಥಳಕ್ಕೆ ಆಗಮಿಸಿ ಹಗ್ಗದ ಮೂಲಕ ಸತತ 2 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಅವರನ್ನು ರಕ್ಷಿಸಿದ್ದಾರೆ.
ನಂತರ ಆತ ಪತ್ನಿಯೇ ನನ್ನನ್ನು ಕೆಳಕ್ಕೆ ತಳ್ಳಿದಳು ಎಂದು ಆರೋಪಿಸಿದ್ದಾರೆ. ಆದರೆ ಗಂಡನೇ ಕಾಲುಜಾರಿಬಿದ್ದ ಎಂದು ಮಹಿಳೆ ಹೇಳಿದ್ದಾರೆ. ಅಲ್ಲಿದ್ದ ಕೆಲ ಪ್ರತ್ಯಕ್ಷದರ್ಶಿಗಳು ಪತ್ನಿಯೇ ಆತನನ್ನು ನದಿಗೆ ತಳ್ಳಿದ್ದಾಗಿ ಹೇಳಿದರು.ಪೊಲೀಸರಿಗೆ ಮಾಹಿತಿ ತಲುಪುವ ಭಯದಲ್ಲಿ ಮಹಿಳೆ ತರಾತುರಿಯಲ್ಲಿ ಪತಿಯನ್ನು ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.
- ಲಕ್ಕುಂಡಿಗೆ ಯುನೆಸ್ಕೋ ಸ್ಥಾನಮಾನ ಪಡೆಯಲು ಸರ್ಕಾರ ಪ್ರಯತ್ನ : ಎಚ್.ಕೆ. ಪಾಟೀಲ
- ಸಿಎಂ, ಡಿಸಿಎಂ ಮನೆಗಳನ್ನು ಸ್ಫೋಟಿಸುವುದಾಗಿ ಇ-ಮೇಲ್ ಬೆದರಿಕೆ
- ಅಕ್ರಮ ಪಟಾಕಿ ದಾಸ್ತಾನು-ಮಾರಾಟ ಮಾಡಿದರೆ ಕಠಿಣ ಕ್ರಮ : ಸೀಮಂತ್ ಕುಮಾರ್ ಸಿಂಗ್ ಎಚ್ಚರಿಕೆ
- ಬೆಂಗಳೂರಲ್ಲಿ ಕುಳಿತು ಅಮೆರಿಕಾದ ಪ್ರಜೆಗಳನ್ನು ಡಿಜಿಟಲ್ ಅರೆಸ್ಟ್ ಮಾಡುತ್ತಿದ್ದ ಕಿಲಾಡಿಗಾಗಿ ಪೊಲೀಸರ ಹುಡುಕಾಟ
- ಪೂಜೆ ಮಾಡಿ ನಿಧಿ ತೆಗೆಸಿ ಕೊಡಿಸುವ ನೆಪದಲ್ಲಿ ಕಳ್ಳತನ ಮಾಡಿದ್ದವನ ಬಂಧನ