Tuesday, September 17, 2024
Homeರಾಜ್ಯವಿರೋಧಪಕ್ಷಗಳ ಆರೋಪಕ್ಕೆ ಸದನದಲ್ಲಿಯೇ ಉತ್ತರ ಕೊಡ್ತೀನಿ : ಸಿಎಂ

ವಿರೋಧಪಕ್ಷಗಳ ಆರೋಪಕ್ಕೆ ಸದನದಲ್ಲಿಯೇ ಉತ್ತರ ಕೊಡ್ತೀನಿ : ಸಿಎಂ

ಬೆಂಗಳೂರು,ಜು.15– ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ವಿರೋಧಪಕ್ಷಗಳು ನೀಡಿರುವ ನಿಲುವಳಿ ಸೂಚನೆಗೆ ಸದನದಲ್ಲಿಯೇ ಉತ್ತರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದ ಯಾವುದೇ ವಿಚಾರವಿದ್ದರೂ ಅದರ ಚರ್ಚೆಗೆ ಸರ್ಕಾರ ಸಿದ್ಧವಿದೆ. ಸದನದಲ್ಲಿ ವಿಪಕ್ಷಗಳು ನಿಲುವಳಿ ಸೂಚನೆ ಸೇರಿದಂತೆ ಯಾವುದೇ ನಿಯಮದಡಿ ಪ್ರಸ್ತಾಪ ಮಾಡಿದರೂ ಅದಕ್ಕೆ ಸದನದ ಒಳಗೆ ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿ ತೆರಳಿದರು.

ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಿಲುವಳಿ ಸೂಚನೆಯಡಿ ಚರ್ಚೆಗೆ ಅವಕಾಶ ನೀಡುವಂತೆ ಸ್ಪೀಕರ್‌ ಅವರಿಗೆ ಮನವಿ ಸಲ್ಲಿಸಿದೆ. ಇದು ಕಲಾಪದಲ್ಲಿ ಕಾವೇರಿದ ಚರ್ಚೆಗೆ ಕಾರಣವಾಗುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಪೂರ್ವ ತಯಾರಿಗಳನ್ನು ಮಾಡಿಕೊಂಡಿದ್ದು, ಸದನದ ಹೊರಗೆ ಚರ್ಚೆ ಮಾಡುವ ಬದಲಾಗಿ ಸದನದ ಒಳಗೇ ಉತ್ತರ ನೀಡುವುದಾಗಿ ಹೇಳಿದರು.

RELATED ARTICLES

Latest News