Monday, May 20, 2024
Homeರಾಜ್ಯಸರ್ಕಾರಿ ನೌಕರರಿಗೆ ಸಿಹಿಸುದ್ದಿ ಕೊಡ್ತಾರಾ ಸಿಎಂ ಸಿದ್ದರಾಮಯ್ಯ..?

ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಕೊಡ್ತಾರಾ ಸಿಎಂ ಸಿದ್ದರಾಮಯ್ಯ..?

ಬೆಂಗಳೂರು,ಮೇ9- ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡು ರಾಜ್ಯದಲ್ಲಿ ನೀತಿ ಸಂಹಿತೆ ಸಡಿಲಿಕೆಯಾಗುತ್ತಿದ್ದಂತೆ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯನ್ನು ಈಡೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು ತೋರಿದ್ದಾರೆ.

ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸೇರಿದಂತೆ ಹಲವು ಸವಲತ್ತುಗಳನ್ನು ನೀಡುವ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್‌ ರಾವ್‌ ನೇತೃತ್ವದ ಸಮಿತಿ ನೀಡಿರುವ ಶಿಫಾರಸ್ಸುಗಳನ್ನು ಅನುಷ್ಠಾನ ಮಾಡಲು ಸರ್ಕಾರ ಮುಂದಾಗಿದೆ.

ಸರ್ಕಾರಿ ನೌಕರರು 7ನೇ ವೇತನ ಆಯೋಗದ ವರದಿ ಜಾರಿಗಾಗಿ ಜಾತಕಪಕ್ಷಿಯಂತೆ ಕಾಯುತ್ತಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಒಂದು ದಿನ ಮೊದಲು 7ನೇ ವೇತನ ಆಯೋಗದ ವರದಿ ಸರ್ಕಾರದ ಕೈ ಸೇರಿದೆ. ಹೀಗಾಗಿ ಮಾದರಿ ನೀತಿ ಸಂಹಿತೆ ಸಡಿಲಗೊಂಡ ಕೂಡಲೇ ವರದಿ ಜಾರಿಗೆ ಸರ್ಕಾರ ಸಿದ್ದತೆ ನಡೆಸಿದೆ.

ಮಾರ್ಚ್‌ 16ರಿಂದ ಜಾರಿಯಲ್ಲಿರುವ ನೀತಿ ಸಂಹಿತೆಯು ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ಚುನಾವಣೆಗೆ ಜೂನ್‌ 3ರವರೆಗೆ ನೀತಿ ಸಂಹಿತೆ ಜಾರಿಯಲ್ಲಿದೆ. ರಾಜ್ಯ ವಿಧಾನಪರಿಷತ್‌ ಚುನಾವಣಾ ಫಲಿತಾಂಶಗಳು ಜೂನ್‌ 6ರಂದು ಹೊರಬೀಳಲಿವೆ.

ಸರ್ಕಾರದ ಎಲ್ಲಾ ಆದೇಶಗಳನ್ನು ಸಿದ್ಧಪಡಿಸುವಂತೆ ನಾವು ತಿಳಿಸಿದ್ದೇವೆ. ಜೂನ್‌ 15ರ ಮೊದಲು ಎಲ್ಲಾ ಆದೇಶಗಳನ್ನು ಹೊರಡಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌.ಕೆ.ಅತೀಕ್‌ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ರ ಬಜೆಟ್‌ನಲ್ಲಿ ನೀಡಿದ ಭರವಸೆಗಳನ್ನು ಜಾರಿಗೆ ತರಲು 337 ಸರ್ಕಾರಿ ಆದೇಶಗಳು ಬೇಕಾಗುತ್ತವೆ ಎಂದು ಅಂದಾಜಿಸಲಾಗಿದೆ. ನಮ್ಮ ವಿನಂತಿಯ ಆಧಾರದ ಮೇಲೆ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆಯ ಸಡಿಲಿಕೆ ಮಾಡುತ್ತದೆ. ಇದು ಕೇಸ್‌ ಟು ಕೇಸ್‌ ಆಧಾರದ ಮೇಲೆ ಇರುತ್ತದೆ ಎಂದು ಅತೀಕ್‌ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಯಾರೇ ಸಚಿವರಾದರೂ ಅಧಿ ಕೃತ ಸಭೆಗಳ ಅಧ್ಯಕ್ಷತೆ ವಹಿಸಲು ಚುನಾವಣಾ ಸಮಿತಿಯ ಒಪ್ಪಿಗೆ ಅಗತ್ಯ. ಯಾವುದೇ ಹೊಸ ಘೋಷಣೆ, ಹೊಸ ಆದೇಶಗಳನ್ನು ನೀಡುವುದು, ಹೊಸ ಟೆಂಡರ್‌ಗಳನ್ನು ಕರೆಯುವುದು, ಹೊಸ ಗುತ್ತಿಗೆಗಳನ್ನು ನೀಡುವುದು, ಹೊಸ ಕೆಲಸದ ಆದೇಶಗಳನ್ನು ವಹಿಸಿಕೊಡುವುದು ಮತ್ತು ಹೊಸ ಯೋಜನೆಗಳನ್ನು ಮಂಜೂರು ಮಾಡುವುದು ಮಾದರಿ ನೀತಿಸಂಹಿತೆಯ ಕಾರಣದಿಂದಾಗಿ ತಡೆಯಾಗುತ್ತವೆ ಎಂದು ಹೇಳಿದ್ದಾರೆ.

ಇನ್ನು, ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಗಿದಿರುವ ಕಾರಣ ಇಷ್ಟು ದಿನ ಚುನಾವಣಾ ಕರ್ತವ್ಯದಲ್ಲಿದ್ದ ಅನೇಕ ಸರ್ಕಾರಿ ನೌಕರರು ತಮ್ಮ ಕೆಲಸಕ್ಕೆ ಹಿಂದಿರುಗಿದ್ದಾರೆ. ಇದರಿಂದ ಆಡಳಿತ ಯಂತ್ರವನ್ನು ಮತ್ತೆ ಚುರುಗೊಳಿಸಲು ಸಹಾಯವಾಗುತ್ತದೆ. ಇದಾದ ನಂತರ ಸರ್ಕಾರ ಹಲವು ಆದೇಶಗಳನ್ನು ಜಾರಿಗೆ ತರಲಿದೆ.

ಆದರೆ, ರಾಜ್ಯ ಕೇಡರ್‌ನ ಸುಮಾರು 50-60 ಐಎಎಸ್‌ ಅಧಿ ಕಾರಿಗಳನ್ನು ಭಾರತದಾದ್ಯಂತ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಸರ್ಕಾರಿ ನೌಕರರು ತಮ್ಮ ತಮ್ಮ ಕೆಲಸಗಳಿಗೆ ಹಿಂತಿರುಗಿದ ನಂತರ ಮತ್ತು ಮಾದರಿ ನೀತಿಸಂಹಿತೆ ಸಡಿಲವಾದ ಬಳಿಕ ಎಲ್ಲಾ ಆದೇಶಗಳು ಜಾರಿಯಾಗುವ ಸಂಭವವಿದೆ. ಸರ್ಕಾರ ಕೂಡ ಈ ನಿಟ್ಟಿನಲ್ಲಿ ಸಿದ್ಧತೆ ನಡೆಸಿದೆ.

RELATED ARTICLES

Latest News