ಬಿಜೆಪಿ-ಜೆಡಿಎಸ್‌‍ ಪಾದಯಾತ್ರೆಗೆ ಅನುಮತಿ ನೀಡುವುದಿಲ್ಲ : ಗೃಹಸಚಿವ ಪರಮೇಶ್ವರ್‌

ಬೆಂಗಳೂರು,ಜು.29- ಮುಡಾ, ವಾಲ್ಮೀಕಿ ಸೇರಿದಂತೆ ವಿವಿಧ ಪ್ರಕರಣವನ್ನು ವಿರೋಧಿಸಿ ಬಿಜೆಪಿ-ಜೆಡಿಎಸ್‌‍ ಪಕ್ಷಗಳು ನಡೆಸುವ ಪಾದಯಾತ್ರೆಗೆ ಅನುಮತಿ ನೀಡುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರು ಪಾದಯಾತ್ರೆ ಮಾಡಿಕೊಳ್ಳಲಿ. ಆದರೆ ಅಧಿಕೃತವಾಗಿ ನಾವು ಅನುಮತಿ ನೀಡುವುದಿಲ್ಲ. ಈ ಹಿಂದೆ ನಾವು ಪಾದಯಾತ್ರೆ ಮಾಡುವಾಗಲೂ ಅವರು ಅನುಮತಿ ನೀಡಿರಲಿಲ್ಲ. ಅವರ ಪಾದಯಾತ್ರೆಗೆ ತಡೆ ಮಾಡುವುದಿಲ್ಲ. ಅಗತ್ಯವಾದ ವ್ಯವಸ್ಥೆ ಮಾಡಿಕೊಡುತ್ತೇವೆ ಎಂದು ತಿಳಿಸಿದರು. ಜೆಡಿಎಸ್‌‍-ಬಿಜೆಪಿಗೆ ಪ್ರತಿಯಾಗಿ ಕಾಂಗ್ರೆಸ್‌‍ನಿಂದ ಹೋರಾಟ ನಡೆಸುವ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ರಣನೀತಿ ರೂಪಿಸುತ್ತಾರೆ. ರಾಜಕೀಯವಾಗಿ … Continue reading ಬಿಜೆಪಿ-ಜೆಡಿಎಸ್‌‍ ಪಾದಯಾತ್ರೆಗೆ ಅನುಮತಿ ನೀಡುವುದಿಲ್ಲ : ಗೃಹಸಚಿವ ಪರಮೇಶ್ವರ್‌