Monday, May 20, 2024
Homeರಾಜ್ಯಮಹಿಳೆ ಅಪಹರಣ ಪ್ರಕರಣ : ಮೂವರನ್ನು ವಶಕ್ಕೆ ಪಡೆದು ಎಸ್‌‍ಐಟಿ ವಿಚಾರಣೆ

ಮಹಿಳೆ ಅಪಹರಣ ಪ್ರಕರಣ : ಮೂವರನ್ನು ವಶಕ್ಕೆ ಪಡೆದು ಎಸ್‌‍ಐಟಿ ವಿಚಾರಣೆ

ಬೆಂಗಳೂರು,ಮೇ9- ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌‍ಐಟಿ ಮೂವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.ಮೊಬೈಲ್‌ ಕರೆಗಳನ್ನು ಆಧರಿಸಿ ಕೆ.ಆರ್‌.ನಗರ ತಾಲ್ಲೂಕಿನ ಮೂವರು ಯುವಕರನ್ನು ಎಸ್‌‍ಐಟಿ ಕರೆತಂದು ವಿಚಾರಣೆಗೊಳಪಡಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಹಾಗೂ ಭವಾನಿ ರೇವಣ್ಣ ಅವರ ಸಂಬಂಧಿ ಸತೀಶ್‌ ಬಾಬು ಅವರನ್ನು ಎಸ್‌‍ಐಟಿ ಬಂಧಿಸಿದೆ.ಕೆ.ಆರ್‌.ನಗರ ತಾಲ್ಲೂಕಿನ ಮಹಿಳೆಯೊಬ್ಬರನ್ನು ಅಪಹರಣ ಮಾಡಲಾಗಿದೆ ಎಂದು ಕೆ.ಆರ್‌.ನಗರ ಪೊಲೀಸ್‌‍ ಠಾಣೆಗೆ ಅವರ ಮಗ ದೂರು ನೀಡಿದ್ದರು.

ಈ ಸಂಬಂಧ ಎಸ್‌‍ಐಟಿ ತನಿಖೆ ನಡೆಸಿ ಅಪಹರಣಕ್ಕೊಳಗಾಗಿದ್ದಾರೆ ಎಂಬ ಮಹಿಳೆಯನ್ನು ಪತ್ತೆಹಚ್ಚಿ ಕರೆತಂದು ವಿಚಾರಣೆಗೊಳಪಡಿಸಿತ್ತು. ಈ ಹಿನ್ನಲೆಯಲ್ಲಿ ಇದೀಗ ಮೂವರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿ ಹಲವು ಮಾಹಿತಿಗಳನ್ನು ಕಲೆ ಹಾಕಿದೆ.

RELATED ARTICLES

Latest News