ಬೆಂಗಳೂರು,ಜು.4-ಸಾಲದ ಹಣವನ್ನು ವಾಪಸ್ ಕೇಳಿದ ಮಹಿಳೆಯ ಮನೆಗೆ ಬೆಂಕಿ ಹಚ್ಚಿರುವ ಘಟನೆ ವಿವೇಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.ವಿವೇಕನಗರದ ನಿವಾಸಿ ವೆಂಕಟರಮಣಿ ಎಂಬುವವರ ಬಳಿ ಆರೋಪಿ ಸುಬ್ರಮಣಿಯ ಸಹೋದರಿ ಪಾರ್ವತಿ ತನ್ನ ಮಗಳ ಮದುವೆಗಾಗಿ 5 ಲಕ್ಷ ಹಣ ಪಡೆದಿದ್ದಾರೆ.
ಹಣ ಪಡೆದು ಹಲವು ವರ್ಷಗಳಾದರೂ ಹಿಂದಿರುಗಿಸಿಲ್ಲ. ಹಾಗಾಗಿ ವೆಂಕಟರಮಣಿಯವರು ಹಣ ವಾಪಸ್ ಕೊಡುವಂತೆ ಪಾರ್ವತಿ ಅವರಿಗೆ ಕೇಳಿದ್ದಾರೆ.ಇದರಿಂದ ಕೋಪಗೊಂಡು ಪಾರ್ವತಿ ಹಾಗೂ ಆಕೆಯ ಮಗಳು ಸೇರಿಕೊಂಡು ವೆಂಕಟರಮಣಿಯವರ ಜೊತೆ ಗಲಾಟೆ ಮಾಡಿದ್ದಾರೆ.
ಈ ವಿಷಯ ತಿಳಿದು ಆರೋಪಿ ಸುಬ್ರಮಣಿ ಕಳೆದ ಮೂರು ದಿನಗಳ ಹಿಂದೆ ವೆಂಕಟರಮಣಿಯವರ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.ಅದೃಷ್ಟವಶಾತ್ ಮನೆಯಲ್ಲಿದ್ದವರು ತಕ್ಷಣ ಹೊರಗೆ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ.
ಆರೋಪಿಯ ಈ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.ಘಟನೆ ಸಂಬಂಧ ವೆಂಕಟರಮಣಿ ಅವರ ಪುತ್ರ ವಿವೇಕನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.
- ಆರ್ಸಿಬಿ ವಿಜಯೋತ್ಸವ ದುರಂತ : ತಿಂಗಳು ಕಳೆದರೂ ಸಂತ್ರಸ್ತರಿಗೆ ಸಿಕ್ಕಿಲ್ಲ ಪರಿಹಾರ
- ಪೊಲೀಸರ ಮುಂದೆ ಬಂದು 40 ವರ್ಷ ಹಿಂದೆ ತಾನು ಮಾಡಿದ್ದ ಕೊಲೆಯ ರಹಸ್ಯ ಬಿಚ್ಚಿಟ್ಟ ವ್ಯಕ್ತಿ..!
- ಹುಲಿಗಳ ಸಾವು ಪ್ರಕರಣ : ಕರ್ತವ್ಯಲೋಪವೆಸಗಿದ ಡಿಸಿಎಫ್ ಸೇರಿ 3 ಅಧಿಕಾರಿಗಳ ಅಮಾನತಿಗೆ ಖಂಡ್ರೆ ಶಿಫಾರಸು
- ಸಾಲ ವಾಪಸ್ ಕೇಳಿದ ಮಹಿಳೆ ಮನೆಗೆ ಬೆಂಕಿಯಿಟ್ಟ ಸಾಲಗಾರ
- ಹೃದಯಾಘಾತದಿಂದ ಹಾಲಿವುಡ್ ನಟ ಸಾವು