Thursday, May 2, 2024
Homeಕ್ರೀಡಾ ಸುದ್ದಿನಕಲಿ ಪ್ರಮಾಣ ಪತ್ರ ವಿಚಾರದಲ್ಲಿ ಠಾಕೂರ್ ಮಧ್ಯಸ್ತಿಕೆಗೆ ಸಾಕ್ಷಿ ಮಲ್ಲಿಕ್ ಮನವಿ

ನಕಲಿ ಪ್ರಮಾಣ ಪತ್ರ ವಿಚಾರದಲ್ಲಿ ಠಾಕೂರ್ ಮಧ್ಯಸ್ತಿಕೆಗೆ ಸಾಕ್ಷಿ ಮಲ್ಲಿಕ್ ಮನವಿ

ನವದೆಹಲಿ,ಜ.31- ಭಾರತ ಕುಸ್ತಿ ಒಕ್ಕೂಟದಿಂದ ಅಮಾನತುಗೊಂಡಿರುವ ಡಬ್ಲ್ಯುಎಫ್ಐ ಅಧ್ಯಕ್ಷ ಸಂಜಯ್ ಸಿಂಗ್ ಅವರು ಚಾಂಪಿಯನ್ಶಿಪ್ ಆಯೋಜಿಸಿ ನಕಲಿ ಪ್ರಮಾಣಪತ್ರಗಳನ್ನು ನೀಡುತ್ತಿದ್ದಾರೆ ಎಂದು ಒಲಿಂಪಿಕ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲ್ಲಿಕ್ ಆರೋಪಿಸಿದ್ದಾರೆ.

ಅಮಾನತುಗೊಂಡ ಅಧಿಕಾರಿಯು ಫೆಡರೇಶನ್ನ ಹಣವನ್ನು ಹೇಗೆ ದುರುಪಯೋಗಪಡಿಸಿಕೊಳ್ಳಬಹುದು ಎಂದು ಮಲಿಕ್ ಪ್ರಶ್ನಿಸಿದ್ದಾರೆ ಮತ್ತು ನಕಲಿ ಪ್ರಮಾಣಪತ್ರಗಳು ಭವಿಷ್ಯದಲ್ಲಿ ಕ್ರೀಡಾಪಟುಗಳನ್ನು ತೊಂದರೆಗೆ ಸಿಲುಕಿಸುತ್ತವೆ ಎಂದು ಎಚ್ಚರಿಸಿದ್ದಾರೆ. ಈ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರಿಗೆ ಮನವಿ ಮಾಡಿದ್ದಾರೆ.

3 ತಿಂಗಳಲ್ಲಿ ಎಲ್ಲಾ ದಾಖಲೆಗಳ ಡಿಜಿಟಲೀಕರಣ : ಸಚಿವ ಕೃಷ್ಣಭೈರೇಗೌಡ

ಕ್ರೀಡಾ ಸಚಿವಾಲಯ ಆಯೋಜಿಸಿರುವ ರಾಷ್ಟ್ರೀಯ ಕುಸ್ತಿ ಚಾಂಪಿಯನ್ಶಿಪ್ ಜೈಪುರದಲ್ಲಿ ನಡೆಯಲಿದೆ, ಆದರೆ ಸಂಜಯ್ ಸಿಂಗ್ ಅವರು ತಮ್ಮ ಪ್ರಾಬಲ್ಯವನ್ನು ಪ್ರತಿಪಾದಿಸಲು ಮತ್ತು ಪ್ರಮಾಣಪತ್ರಗಳಿಗೆ ಸಹಿ ಹಾಕಲು ಪ್ರತ್ಯೇಕ ರಾಷ್ಟ್ರೀಯ ಚಾಂಪಿಯನ್ಶಿಪ್ ಅನ್ನು ಕಾನೂನುಬಾಹಿರವಾಗಿ ಆಯೋಜಿಸುತ್ತಿದ್ದಾರೆ ಎಂದು ಮಲಿಕ್ ಎಕ್ಸ್ ನಲ್ಲಿ ಪೊಸ್ಟ್ ಮಾಡಿ ಆರೋಪಿಸಿದ್ದಾರೆ.

RELATED ARTICLES

Latest News