Sunday, April 28, 2024
Homeರಾಜಕೀಯಕೋವಿಡ್ ಭ್ರಷ್ಟರ ಮಾಹಿತಿ ಯತ್ನಾಳ್ ಅವರು ನ್ಯಾಯಮೂರ್ತಿಗಳಿಗೆ ನೀಡಲಿ : ಗುಂಡೂರಾವ್

ಕೋವಿಡ್ ಭ್ರಷ್ಟರ ಮಾಹಿತಿ ಯತ್ನಾಳ್ ಅವರು ನ್ಯಾಯಮೂರ್ತಿಗಳಿಗೆ ನೀಡಲಿ : ಗುಂಡೂರಾವ್

ಬೆಂಗಳೂರು,ಜ.10- ಕೋವಿಡ್ ಭ್ರಷ್ಟರ ಮಾಹಿತಿಯನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ತಮ್ಮ ಪಕ್ಷದ ಕೇಂದ್ರದ ನಾಯಕರಿಗೆ ನೀಡುವ ಬದಲು ನ್ಯಾಯಮೂರ್ತಿ ಕುನ್ನಾ ಅವರ ತನಿಖಾ ಆಯೋಗಕ್ಕೆ ನೀಡಲಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.

ಕೋವಿಡ್‍ನಲ್ಲಿ ಕಾಯಕ ಮರೆತು ಕಳಂಕದ ಕೆಲಸ ಮಾಡಿದ ಭ್ರಷ್ಟರ ಮಾಹಿತಿಯನ್ನು ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ಕೇಂದ್ರ ನಾಯಕರಿಗೆ ನೀಡಿದರೆ ಏನು ಪ್ರಯೋಜನ ಎಂದಿದ್ದಾರೆ.ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೆÇೀಸ್ಟ್ ಮಾಡಿರುವ ಆರೋಗ್ಯ ಸಚಿವರು ಕೇಂದ್ರ ನಾಯಕರ ಸಹಕಾರವಿಲ್ಲದೇ 40 ಸಾವಿರ ಕೋಟಿ ರೂ. ಕೋವಿಡ್ ಭ್ರಷ್ಟಾಚಾರ ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರದಲ್ಲಿ ನಡೆದಿರುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.

ಕೋವಿಡ್ ಭ್ರಷ್ಟಾಚಾರದ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮಲ್ಲಿರುವ ಮಾಹಿತಿ, ದಾಖಲೆಗಳನ್ನು ಕೇಂದ್ರ ನಾಯಕರಿಗೆ ನೀಡುವ ಬದಲು ನ್ಯಾಯಮೂರ್ತಿ ಕುನ್ನಾ ಅವರ ತನಿಖಾ ಆಯೋಗಕ್ಕೆ ನೀಡಿದರೆ ಒಳ್ಳೆಯದು ಎಂದು ಹೇಳಿದ್ದಾರೆ.

ಪಾಕ್ ಜೈಲಿನಲ್ಲಿ 78 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ ಮುಂಬೈ ದಾಳಿಯ ಮಾಸ್ಟರ್ ಮೈಂಡ್

ಬಸವೇಶ್ವರರ ಅನುಯಾಯಿ ಎಂದು ಹೇಳಿಕೊಳ್ಳುವ ಯತ್ನಾಳ್ ಅಂತರಂಗ ಶುದ್ಧಿ, ಬಹಿರಂಗ ಶುದ್ಧಿ ಎರಡನ್ನೂ ಪಾಲಿಸಬೇಕು. ನಾಲ್ಕು ಗೋಡೆಗಳ ಮಧ್ಯೆ ಕೇಂದ್ರ ನಾಯಕರಿಗಷ್ಟೇ ಮಾಹಿತಿ ನೀಡಿದ್ದೇನೆ ಎಂದರೆ, ಅದರಿಂದ ಪ್ರಯೋಜನವಿಲ್ಲ ಎಂದು ತಿಳಿಸಿದ್ದಾರೆ.

ಬಸವಣ್ಣನವರ ವಚನ ಪ್ರಸ್ತಾಪಿಸಿರುವ ಸಚಿವರು, ಕೋವಿಡ್ ವೇಳೆ ಬಸವಣ್ಣನವರ ಕಾಯಕವೇ ಕೈಲಾಸ ಎಂಬ ಶ್ರೇಷ್ಠ ಸಂದೇಶವನ್ನು ಪಾಲಿಸಬೇಕಿತ್ತು. ಆದರೆ, ಜನರ ಜೀವ ಉಳಿಸಲು ಹೋರಾಟ ನಡೆಯುತ್ತಿದ್ದಾಗ ಬರೀ ಕಳಂಕದ ಕೆಲಸದಲ್ಲಿ ತೊಡಗಿದ್ದು ಅತ್ಯಂತ ಅಮಾನವೀಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

RELATED ARTICLES

Latest News